ಉಪ್ಪಿನಂಗಡಿ : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಸೆ ತೋರಿಸಿ , ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರಗೈದ ಕೃತ್ಯಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿಯಾಗಿರುವ 13 ವರ್ಷದ ಬಾಲಕಿಯನ್ನು ನೆರೆಮನೆಯ ಮುನಾಸೀರ್ ಎಂಬಾತ ಕಳೆದ ಮೇ ತಿಂಗಳ 30 ರಂದು ಶಾಲೆಗೆ ಕರೆದೊಯ್ಯುವೆನೆಂದು ತಿಳಿಸಿ ಕಾರಿನಲ್ಲಿ ಉಪ್ಪಿನಂಗಡಿಯ ಲಾಡ್ಜ್ ಗೆ ಕರೆದೊಯ್ದು ಐದಾರು ಬಾರಿ ದೈಹಿಕ ಸಂಪರ್ಕ ನಡೆಸಿದ್ದು, ಬಳಿಕ ಜೂನ್ 7 ರ ಮಂಗಳವಾರವೂ ಬಾಲಕಿಯು ಮನೆಯಿಂದ ಹೊರಟು ಶಾಲೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ , ಆರೋಪಿಯು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಉಪ್ಪಿನಂಗಡಿಯ ಲಾಡ್ಜ್ಗೆ ಕರೆ ತಂದು ಮೂರು ಬಾರಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರವೆಸಗಿರುತ್ತಾನೆಂದು , ಬಳಿಕ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಸಾಯಿಸುತ್ತೇನೆಂದು ಬೆದರಿಕೆಯೊಡ್ಡಿ ಬಾಲಕಿಯನ್ನು ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುತ್ತಾನೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪೊಕ್ಸೋ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.