ವೈದ್ಯಕೀಯ ತಜ್ಞ ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟ್ಸ್ ಸೆಂಟರ್ ಮತ್ತು ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ ಜೂ.7 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ|ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.

ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳ 63 ಮಂದಿ ಫಲಾನುಭವಿಗಳು ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು.

ಕ್ಲಿನಿಕ್‌ನ ವೈದ್ಯಕೀಯ ತಜ್ಞ ಡಾ.ನಝೀರ್ ಅಹಮ್ಮದ್‌ರವರು ಫಲಾನುಭವಿಗಳಿಗೆ ಆರೋಗ್ಯದ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಿದರು. ಮೆಕ್‌ಲೀಡ್ಸ್ ಕಂಪೆನಿ, ಎಸ್‌ಆರ್‌ಎಲ್ ಲ್ಯಾಬ್ ಹಾಗೂ ಡಾ,ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಮಧು ನರಿಯೂರು, ಕಾರ್ಯದರ್ಶಿ ಶ್ರೀಧರ್ ಕಣಜಾಲು, ಸದಸ್ಯ ಜಗದೀಶ್ ಆಚಾರ್ಯ, ರಾಜ್‌ಗೋಪಾಲ್ ಬಲ್ಲಾಳ್‌ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here