ಚುಟುಕು ಸಾಹಿತ್ಯ ಪರಿಷತ್ತು ಕಡಬ ತಾಲೂಕು ಅಧ್ಯಕ್ಷರಾಗಿ ವಿ.ಕೆ.ಕಡಬ ನೇಮಕ

0

ಕಡಬ :ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ನೂತನ ಅಧ್ಯಕ್ಷರನ್ನಾಗಿ ಎಸ್.ಡಿ.ಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ,ಪತ್ರಕರ್ತ ವಿ.ಕೆ ಕಡಬ ಅವರು ನೇಮಕಗೊಂಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಇವರನ್ನು ನೇಮಕ ಮಾಡಿದ್ದಾರೆ. ಕನ್ನಡ ಮತ್ತು ತುಳು ಭಾಷೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡುತ್ತಿರುವ ವಿ.ಕೆ ಕಡಬ ಅವರು ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ.

ಆಕಾಶವಾಣಿಯಲ್ಲಿ ಎರಡು ವರ್ಷ ತುಳು ವಿಭಾಗದಲ್ಲಿ ಕಾರ್ಯಕ್ರಮ ನಿರ್ಮಾಣ ಸಹಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಬಳಿಕ ಸಂತ ಅಲೋಶಿಯಸ್ ಕಾಲೇಜು ಅಧೀನದ ರೇಡಿಯೋ ಸಾರಂಗ್ ನಲ್ಲಿ ತುಳು ವಿಭಾಗದಲ್ಲಿ ಆರು ವರ್ಷ ಕಾರ್ಯಕ್ರಮ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸಿದ್ದರು. ತೆಂಗು ಉತ್ಪಾದಕರ ಕಂಪೆನಿ ನಿಯಮಿತ ಇದರ ಕಡಬ ತಾಲೂಕು ನಿರ್ದೇಶಕರಾಗಿರುವ ಇವರು ಮಾಧ್ಯಮ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here