ಕೆಯ್ಯೂರು: ಕೊಳ್ತಿಗೆ ಗ್ರಾಮದ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಣಿಯಾರಿನಲ್ಲಿ ಜೂ.8ರಂದು ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಹಾಗೂ ವಾಸ್ತುಶಿಲ್ಪಿ ರಾಧಾಕೃಷ್ಣ ಆಚಾರ್ಯರ ಮಾರ್ಗದರ್ಶನದಲ್ಲಿ ನಾಗಪ್ರತಿಷ್ಟೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ, ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕಣಿಯಾರು ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.