ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಞಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನು ಅರಿತು ಅದರ ಸದುಪಯೋಗವನ್ನು ಪಡೆಯಬೇಕು. ಈ ಮೂಲಕ ಆ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆಕಾರ್ಯದರ್ಶಿ ರೂಪಲೇಖ ಶುಭಹಾರೈಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಾರ್ಯಕ್ರಮವು ಎಲ್ಲಾ ವಿಧಿವಿಧಾನಗಳೊಂದಿಗೆ ಜೂ.9ನೇ ಗುರುವಾರದಂದು ಕಾರ್ತಿಕ್ ಶಾಸ್ತ್ರಿ, ಆದಿತ್ಯನಾರಾಯಣ ಮತ್ತು ಹರಿಪ್ರಸಾದ್ ಅವರ ನೇತೃತ್ವದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕ ಸಂತೋಷ ಬಿ. ಸದಸ್ಯರಾದ ಪ್ರಸನ್ನ ಕುಮಾರ್, ಮೋಹಿನಿ ದಿವಾಕರ, ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್, ಉಪನ್ಯಾಕರು, ಪೋಷಕರು ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ಸಮೂಹ ಭಾಗವಹಿಸಿದ್ದರು.