ನೆಲ್ಯಾಡಿ: ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜಿಯನ್ ವತಿಯಿಂದ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜಿಯನ್ ಅಧ್ಯಕ್ಷ ವೆಂಕಟ್ರಮಣ ಆರ್., ನಿಕಟಪೂರ್ವ ಅಧ್ಯಕ್ಷ ಡಾ.ಸದಾನಂದ ಕುಂದರ್, ಉಪಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪದಾಧಿಕಾರಿಗಳಾದ ಚಂದ್ರಶೇಖರ ಬಾಣಜಾಲು, ಪುರಂದರ ಗೌಡ ಡೆಂಜ, ರವಿಚಂದ್ರ ಹೊಸವೊಕ್ಲು, ಮೋಹನ್ಕುಮಾರ್ ವಿ., ಜಾಹ್ನವಿ ಪುರಂದರ ಗೌಡರವರು ಉಪಸ್ಥಿತರಿದ್ದರು.