ನೆಲ್ಯಾಡಿ: ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಮುಂದಿನ 5 ವರ್ಷಗಳ ಅವಧಿಗೆ ನೆಲ್ಯಾಡಿಯ ಉಷಾ ಅಂಚನ್ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 ನಿರ್ದೇಶಕರಿರುವ ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲಕ್ಕೆ ಮಹಿಳಾ ಮೀಸಲು ಕ್ಷೇತ್ರದಿಂದ ಉಷಾ ಅಂಚನ್ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು 2ನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತಾ.ಪಂ.ಮಾಜಿ ಸದಸ್ಯೆಯಾಗಿರುವ ಉಷಾ ಅಂಚನ್ರವರು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷೆ, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರ ಸಂಘ ಪುತ್ತೂರು ಇದರ ಮಾಜಿ ನಿರ್ದೇಶಕಿಯಾಗಿದ್ದಾರೆ. ಪ್ರಿಯದರ್ಶಿನಿ ಸಹಕಾರ ಸಂಘದ ನಿರ್ದೇಶಕಿಯಾಗಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿಯಾಗಿ, ಕೊಣಾಲು ಆರ್ಲ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ, ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜು ಅನುಷ್ಠಾನ ಸಮಿತಿ ಅಧ್ಯಕ್ಷೆಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.