ನಾಳೆ(ಜೂ.11) ಉಪ್ಪಳಿಗೆ ವಿಷ್ಣು ಯುವಕ ಮಂಡಲದ ವಾರ್ಷಿಕೋತ್ಸವ

0

ಪುತ್ತೂರು:ಇರ್ದೆ-ಉಪ್ಪಳಿಗೆ ಶ್ರೀ ವಿಷ್ಣು ಯುವಕ ಮಂಡಲದ ವಾರ್ಷಿಕೋತ್ಸವವು ಜೂ.11ರಂದು ಉಪ್ಪಳಿಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಉಪ್ಪಳಿಗೆ ಹಿ.ಪ್ರಾ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲೋಕನಾಥ ಆಚಾರ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ.

 

 

ಬಳಿಕ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಅಪರಾಹ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ವಿಷ್ಣು ಯುವಕ ಮಂಡಲದ ಅಧ್ಯಕ್ಷ ಧನಂಜಯ ನಾಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಬ್ರೈಟ್‌ವೇ ಇಂಡಿಯಾ ಕನ್ಸಲ್ಟೆನ್ಸಿಯ ಮನಮೋಹನ್ ರೈ ಚೆಲ್ಯಡ್ಕ, ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ನ್ಯಾಯವಾದಿ ಚಿದಾನಂದ ಬೈಲಾಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಾಸ್‌ಪ್ರಕಾಶ್ ರೈ, ಸಂಪ್ಯ ಠಾಣಾ ಎಸ್‌ಐ ಉದಯರವಿ, ಕರ್ನಾಟಕ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಮ್ಮದ್ ಕುಕ್ಕುವಲ್ಲಿ, ಯುವ ಉದ್ಯಮಿ ಯತೀಶ್ ರೈ ಚೆಲ್ಯಡ್ಕ, ಕಮಲ್ ಕನ್‌ಸ್ಟ್ರಕ್ಷನ್‌ನ ಕಮಲ್ ಕುಲಾಲ್, ಶಿವಂ ಕಂಪ್ಯೂಟರ್‍ಸ್‌ನ ಮ್ಹಾಲಕ ಸುದರ್ಶನ್ ರೈ ನೀರ್ಪಾಡಿ, ನಗರ ಸಭಾ ಸದಸ್ಯ ಪದ್ಮನಾಭ ನಾಕ್, ನಿವೃತ್ತ ಮುಖ್ಯಗುರು ದೇವಪ್ಪ ನಾಯ್ಕ, ಉಪ್ಪಳಿಗೆ ಹಿ.ಪ್ರಾ ಶಾಲಾ ಮುಖ್ಯಶಿಕ್ಷಕಿ ಲಿಂಗಮ್ಮ, ಉಪ್ಪಳಿಗೆ ಪ್ರೌಢ ಶಾಲಾ ಮುಖ್ಯಶಿಕ್ಷಕ ನಾರಾಯಣ ಕೆ. ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಸಂಪ್ಯ ಠಾಣಾ ಪೊಲೀಸ್ ಸಿಬಂದಿಗಳಾದ ಪ್ರವೀಣ್ ರೈ, ವರ್ಗೀಸ್, ಜಗದೀಶ್, ಅದ್ರಾಮ, ಮೆಸ್ಕಾಂನ ಬೆಟ್ಟಂಪಾಡಿ ಉಪ ವಿಭಾಗದ ಪವರ್‌ಮೆನ್‌ಗಳಾದ ಮಂಜುನಾಥ ಮತ್ತು ಮಿಥುನ್‌ರವರನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಅಮ್ಮ ಕಲಾವಿದರು ಕುಡ್ಲ ಇವರಿಂದ ಪರಕೆ ಪೂವಕ್ಕೆ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here