- ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನವೂ ಆರ್ ಎಸ್ ಎಸ್ ನ ಅಜೆಂಡದಲ್ಲೊಂದದಾಗಿದೆ – ಶಾಫಿ ಬೆಳ್ಳಾರೆ
ಪುತ್ತೂರು: ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಯಾಗಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಷ್ಟ್ರೀಯ ವಕ್ತಾರುಗಳಾದ ನೂಪುರ್ ಶರ್ಮ ಮತ್ತು ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಎಸ್ ಡಿ ಪಿ ಐ ವತಿಯಿಂದ ಪ್ರತಿಭಟನೆ ನಡೆಯಿತು.
ಅಮರ್ ಜವಾನ್ ಚೌಕಿಯ ಬಳಿ ಜೂ.10ರಂದು ಪ್ರತಿಭಟನೆ ನಡೆಯಿತು. ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಪ್ರಧಾನ ಭಾಷಣ ಮಾಡಿದರು. ಪ್ರವಾದಿ ಮಹಮ್ಮದ್ ಬಗ್ಗೆ ಅವಹೇಳನವೂ ಆರ್ ಎಸ್ ಎಸ್ ನ ಅಜೆಂಡದಲ್ಲೊಂದದಾಗಿದೆ. ಧರ್ಮಗಳ ನಡುವೆ ಕಳಹ ತರುವುದು ಇವರ ಅಜೆಂಡವಾಗಿದೆ. ಹಾಗಾಗಿ ನೂಪುರ್ ಶರ್ಮ ಮತ್ತು ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದರೆ ಸಾಲದು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹೇಳಿದ್ದಾರೆ.
ರಾಜ್ಯಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಮಾತನಾಡಿದರು. ಪುತ್ತೂರು ವಿಧಾನ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ರಹೀಮ್ ಅವರು ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಅನ್ವರ್ ವಂದಿಸಿದರು.