ಜೂ. 24: ಇರ್ದೆ – ಬೆಟ್ಟಂಪಾಡಿ ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ ಕೇಂದ್ರ ಕಛೇರಿ ಕಟ್ಟಡ ಉದ್ಘಾಟನೆ – ಆಮಂತ್ರಣ ಪತ್ರ ಬಿಡುಗಡೆ

0

ಬೆಟ್ಟಂಪಾಡಿ: ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ನೂತನ ಕೇಂದ್ರ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಜೂ. 24 ರಂದು ನಡೆಯಲಿದ್ದು, ಅದರ ಆಮಂತ್ರಣ ಪತ್ರ ಬಿಡುಗಡೆ ಜೂ. 11 ರಂದು ಸಂಘದ ಆವರಣದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರೂ ಆದ ಡಾI ಎಂ.ಎನ್. ರಾಜೇಂದ್ರ ಕುಮಾರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸಹಿತ ಅನೇಕ‌ ಗಣ್ಯರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅತ್ಯಂತ ವ್ಯವಸ್ಥಿತವಾಗಿ ಮತ್ತು ವಿಜೃಂಭಣೆಯಿಂದ ಕಾರ್ಯಕ್ರಮ ನಡೆಸಲು ಎಲ್ಲಾ ರೀತಿಯ ಯೋಜನೆ ಸಿದ್ದಪಡಿಸಿದ್ದೇವೆ’ ಎಂದು ಸಂಘದ ಅಧ್ಯಕ್ಷ ಕೆ.ಎಸ್. ರಂಗನಾಥ ರೈ ಇದೇ ವೇಳೆ ಹೇಳಿದರು. ಉಪಾಧ್ಯಕ್ಷ ಗಿರೀಶ್ವರ ಭಟ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ, ಸಂಘದ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಕರುಣಾಕರ ಶೆಟ್ಟಿ ಕೋರ್ಮಂಡ, ಶೇಷಪ್ಪ ರೈ ಮೂರ್ಕಾಜೆ, ಹರೀಶ್ ಗೌಡ ಗುಮ್ಮಟೆಗದ್ದೆ, ದೇವಪ್ಪ ನಾಯ್ಕ ಕೆ., ಸದಾಶಿವ ರೈ, ಚಂದ್ರನ್ ತಲೆಪ್ಪಾಡಿ, ನಾಗರಾಜ ಕಜೆ, ದೀಪಿಕಾ ಪಿ. ರೈ, ಆಶಾ ಅರವಿಂದ, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ., ಸಿಬಂದಿಗಳಾದ ಲಿಂಗಪ್ಪ ಗೌಡ, ಗಂಗಾ ಸಿ., ಮಹಮ್ಮದ್ ಕುಂಞಿ, ಸ್ವಾತಿ ಎಂ. ಹಾಗೂ ಬಾಲಕೃಷ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here