ಪುಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ನಗರ ಸಮಿತಿಯ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಬಪ್ಪಳಿಗೆಯಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜೂ.12ರಂದು ನಡೆಯಿತು.
ಪುತ್ತೂರು ಬಿಲ್ಲ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮ ಉದ್ಘಾಟಿಸಿದರು. ಬಿಲ್ಲವ ನಗರ ಸಮಿತಿ ಅಧ್ಯಕ್ಷ ಅವಿನಾಶ್ ಪೂಜಾರಿ ಹಾರಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಲ್ಲವ ಸಂಘದ ಕಾರ್ಯದರ್ಶಿ ನಾಗೇಶ್ ಬಲ್ನಾಡು, ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ, ಕೋಶಾಧಿಕಾರಿ ಮಹೇಶ್ಚಂದ್ರ ಸಾಲ್ಯಾನ್, ಜೊತೆ ಕಾರ್ಯದರ್ಶಿ ಚಿದಾನಂದ ಸುವರ್ಣ, ಕಾರ್ಯನಿರ್ವಾಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ನಗರ ವಲಯ ಸಂಚಾಲಕ ಕಿರಣ್ ಕುಮಾರ್, ಯುವವಾಹಿನಿ ಘಟಕದ ಅಧ್ಯಕ್ಷ ಅನುಪ್ ಕುಮಾರ್ ಉಪಸ್ಥಿತರಿದ್ದರು. ದೀಪಕ್ ಪೂಜಾರಿ ದರ್ಬೆ ವರದಿ ವಾಚಿಸಿದರು. ಕಾರ್ಯದರ್ಶಿ ದೇವಿಕಾ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.