ಪುತ್ತೂರು: ಮಕ್ಕಳ ಹಕ್ಕುಗಳ ಸಂಸ್ಥೆ ವತಿಯಿಂದ ಅರಿಯಡ್ಕ ಗ್ರಾಮ ಪಂಚಾಯತ್ನಲ್ಲಿ `ಆಡಳಿತದಲ್ಲಿ ಮಕ್ಕಳು’ ಎನ್ನುವ ವಿಷಯದಲ್ಲಿ ಮಾಹಿತಿ ಕಾರ್ಯಕ್ರಮ ಜೂ.14ರಂದು ನಡೆಯಿತು.
ಮಕ್ಕಳ ಹಕ್ಕುಗಳ ಸಂಸ್ಥೆ ಬೆಂಗಳೂರು ಇದರ ಅಸಿಸ್ಟಂಟ್ ಪ್ರಾಜೆಕ್ಟ್ ಕೋಆರ್ಡಿನೇಟರ್ ಕೌಶಿಕ್ರವರು ಮಕ್ಕಳ ಗ್ರಾಮ ಸಭೆಯನ್ನು ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಅಧ್ಯಕ್ಷೆ ಸೌಮ್ಯಾ ಬಾಲಸುಬ್ರಹ್ಮಣ್ಯ, ಉಪಾಧ್ಯಕ್ಷ ಸಂತೋಷ್ ಮಣಿಯಾನಿ, ಪಿಡಿಓ ಪದ್ಮಕುಮಾರಿ, ಮಕ್ಕಳ ಹಕ್ಕುಗಳ ಸಂಸ್ಥೆ ಪುತ್ತೂರು ತಾಲೂಕು ಕಾರ್ಯಕ್ಷೇತ್ರದ ಸಂಯೋಜಕಿ ರಮ್ಯಾ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆ ಬೆಳ್ತಂಗಡಿ ತಾಲೂಕು ಕಾರ್ಯಕ್ಷೇತ್ರದ ಸಂಯೋಜಕ ವಿಶ್ವಾಸ್ ಕೆ.ಬಿ ಹಾಗೂ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಮಕ್ಕಳ ಹಕ್ಕುಗಳ ಸಂಸ್ಥೆ ಪುತ್ತೂರು ತಾಲೂಕು ಕಾರ್ಯಕ್ಷೇತ್ರದ ಸಂಯೋಜಕಿ ರಮ್ಯಾ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.