ಪುತ್ತೂರು: ಶಾಲಾ ಮಕ್ಕಳಿಗೆ ಬಿಸಿಯೂಟದ ಅಡುಗೆಯನ್ನು ಮಾಡಿಕೊಂಡಿರುವ ವೇಳೆ ಅಡುಗೆ ಮನೆಯ ಬಾಗಿಲು ಬಳಿ ತಯಾರು ಮಾಡಿ ಇಟ್ಟಿದ್ದ ಬಿಸಿ ಸಾಂಬಾರು ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಸೈಂಟ್ ವಿಕ್ಟರ್ ಶಾಲೆಯ ಅಡುಗೆ ಸಹಾಯಕಿ ಅಗ್ನೇಸ್ ಪ್ರಮೀಳಾ ಅವರು ಜೂ. 13ರಂದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಕುರಿಯ ಗ್ರಾಮದ ಮಲಾರು ನಿವಾಸಿ ಜಾರ್ಜ್ ಪ್ರಸನ್ನ ಡಿ. ಅವರ ಸಹೋದರಿ ಅಗ್ನೇಸ್ ಪ್ರಮೀಳಾ ಡಿಸೋಜಾ (37ವ)ರವರು ಮೃತಪಟ್ಟವರು. ಅವರು ಮೇ30ರಂದು ಎಂದಿನಂತೆ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಅಡುಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಡುಗೆ ಮನೆಯ ಬಾಗಿಲು ಬಳಿ ತಯಾರು ಮಾಡಿ ಇಟ್ಟಿದ್ದ ಬಿಸಿ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಸಾಂಬಾರ್ ಅಗ್ನೇಸ್ ಪ್ರಮೀಳಾ ಅವರ ಮೈ ಮೇಲೆ ಬಿದ್ದು ಸುಟ್ಟ ಗಾಯಗೊಂಡವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲಿಸಿದ್ದರು, ಅಲ್ಲಿ ಚಿಕಿತ್ಸೆಯಲ್ಲಿದ್ದ ಅಗ್ನೆಸ್ ಪ್ರಮೀಳಾ ಡಿಸೋಜಾರವರು ಜೂ.13ರಂದು ಮೃತಪಟ್ಟಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.