ಶಾಂತಿಮೊಗರು ಶ್ರೀ ಸುಬ್ರಹ್ಮಣ್ವೇಶ್ವರ ದೇವಸ್ಥಾನದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ, ಭಜನಾ ಕಾರ್ಯಕ್ರಮ

0

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ವೇಶ್ವರ ದೇವಸ್ಥಾನದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಜೂ 14ರಂದು ನಡೆಯಿತು.

ಪ್ರತಿ ತಿಂಗಳ ಹುಣ್ಣಿಮೆ ದಿವಸ ಪ್ರಯುಕ್ತ ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ ಶ್ರೀ ದುರ್ಗಾ ಪೂಜೆ ನಡೆಯಲಿದೆ. ಭಕ್ತಾಧಿಗಳು ಒಂದು ದಿನದ ಮುಂಚಿತವಾಗಿ ಪೂಜಾ ರಶೀದಿ ಮಾಡಿಸಿಕೊಂಡು ಸಂಕಲ್ಪಗಳಲ್ಲಿ ಭಾಗವಹಿಸಬೇಕಾಗುತ್ತದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಳಿಕ ಪ್ರತಿ ದಿನ ಮೂರು ಹೊತ್ತು ಪೂಜೆ ನಡೆಯುತ್ತದೆ. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ದೇವಸ್ಥಾನದ ಅನುವಂಶೀಯ ಮೊಕ್ತೇಸರರು, ಆಡಳಿತ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಮಿತಿ ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದ ಬಳಿಕ ಪ್ರತಿ ದಿನ ಮೂರು ಹೊತ್ತು ಪೂಜೆ ನಡೆಯುತ್ತಿದೆ. ಪ್ರತಿ ತಿಂಗಳ ಹುಣ್ಣಿಮೆ ದಿವಸ ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಸತ್ಯನಾರಾಯಣ ಪೂಜೆ, ಸಂಜೆ ದುರ್ಗಾ ಪೂಜೆ, ಭಜನೆ ನಡೆಯಲಿದೆ.

-ಸತೀಶ್ ಕುಮಾರ್ ಕೆಡೆಂಜಿ
ಅಧ್ಯಕ್ಷರು, ಆಡಳಿತ ಸಮಿತಿ, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು

LEAVE A REPLY

Please enter your comment!
Please enter your name here