ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

0

ರಾಮಕುಂಜ: ರಕ್ತದಾನ ಮಹಾದಾನ, ಜೀವ ಉಳಿಸುವ ಈ ರಕ್ತದಾನದಲ್ಲಿ ಎಲ್ಲರೂ ಭಾಗವಹಿಸಿ ಎಂದು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಹರ್ಷಿತ್ ಅಭಿಪ್ರಾಯಪಟ್ಟರು.


ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ರೆಡ್‌ಕ್ರಾಸ್ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಅಭಿಪ್ರಾಯಪಟ್ಟರು. ಅರ್ಥಶಾಸ್ತ್ರ ಉಪನ್ಯಾಸಕ ಅಜಿತ್ ಕುಮಾರ್‌ರವರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಐಕ್ಯುಎಸಿ ಘಟಕದ ಮುಖ್ಯಸ್ಥ ದಿವಾಕರ ಕೆ., ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಘಟಕದ ಸಂಯೋಜಕ ರಘುರಾಮ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ವೇತಾ ವಂದಿಸಿದರು. ವಿದ್ಯಾರ್ಥಿನಿ ಸ್ವಪ್ನ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here