ಬೆಟ್ಟಂಪಾಡಿ: ಇಲ್ಲಿನ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 18 ರಂದು ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಆಮಂತ್ರಣ ಪತ್ರ ಬಿಡುಗಡೆ ಜೂ. 15 ರಂದು ನಡೆಯಿತು. ಶಾಲಾ ವಿದ್ಯಾರ್ಥಿಗಳು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಶಾಲಾ ನೂತನ ಕೊಠಡಿಗಳ, ಕೇಶವ ದರ್ಶಿನಿ ಸಭಾಂಗಣ ಹಾಗೂ ಸುಮೇಧ ಗಣಕಯಂತ್ರ ಕೊಠಡಿಯ ಉದ್ಘಾಟನೆ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ. 18 ರಂದು ನಡೆಯಲಿದೆ. ಶಾಸಕ ಸಂಜೀವ ಮಠಂದೂರು ವಿವಿಧ ಉದ್ಘಾಟನೆ ನೆರವೇರಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹಾಗೂ ನೋಟರಿ ನ್ಯಾಯವಾದಿ ಚಿದಾನಂದ ಬೈಲಾಡಿಯವರು ಉಪಸ್ಥಿತರಿರಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.