ಪುತ್ತೂರು: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿನ ವಿದ್ಯಾರ್ಥಿಗಳ ಪೋಷಕರಿಂದ ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶಾಲಾ ಕೈತೋಟ ಹಾಗೂ ತರಕಾರಿ ತೋಟ ನಿರ್ಮಾಣ ಕಾರ್ಯದಲ್ಲೂ ಪೋಷಕರು ಸಹಕರಿಸಿದರು. ಶಾಲಾ ಮುಖ್ಯಗುರು ಗಣಪತಿ ಭಟ್ ಕೃತಜ್ಞತೆ ಸಲ್ಲಿಸಿದರು. ಸಂಸ್ಥೆಯ ಶಿಕ್ಷಕರು, ಶಿಕ್ಷಕೇತರ ವೃಂದದವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.