ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂ 16ರಂದು ಸಂಘದ ವಠಾರದಲ್ಲಿ ನಡೆಯಿತು.
ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಅನಂತರಾಮ ಉಪಾಧ್ಯಾಯ ತುಂಬ್ಯ ಉದ್ಘಾಟಿಸಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಕೊಂಡಾಡಿಕೊಪ್ಪ ಶಾಲಾ ಶಿಕ್ಷಕರಾದ ಜಯಂತ್ ವೈ ಯೋಗ ತರಬೇತಿ ನೀಡಿದರು. ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಉಪಾಧ್ಯಕ್ಷ ರಾಜೇಶ್ ಮುಂಡಾಳ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಗೌಡ, ನಿರ್ದೇಶಕರಾದ ರಾಮಣ್ಣ ಗೌಡ ಮುಗರಂಜ, ರಾಜೇಶ್ ಮೀಜೆ, ಹೇಮಾವತಿ ಎಂ.ಎಲ್.ಮುಗರಂಜ, ಸಿಬ್ಬಂದಿಗಳಾದ ಚಂದ್ರಶೇಖರ್ ಬೈತಡ್ಕ, ಪುಷ್ಪಾ ಹಾಗೂ ಸಂಘದ ಸದಸ್ಯರು ಯೋಗದಲ್ಲಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು ಸ್ವಾಗತಿಸಿದರು.