ಹಿರೆಬಂಡಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಿನಂಗಡಿ ವಲಯದ ಹಿರೆಬಂಡಾಡಿ ಶಾಖೆಪುರದಲ್ಲಿ ಪ್ರಕೃತಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ನಡೆಯಿತು.
ಹಿರೇಬಂಡಾಡಿ ಗ್ರಾ.ಪಂ.ಉಪಾಧ್ಯಕ್ಷೆ ಭವಾನಿ ಅವರು ಉದ್ಘಾಟಿಸಿ, ಜ್ಞಾನ ವಿಕಾಸ ಕೇಂದ್ರ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಶುಭಹಾರೈಸಿದರು. ವಲಯದ ಮೇಲ್ವಿಚಾರಕ ಚಂದ್ರಶೇಖರ್ ಅವರು ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮಗಳು ಮಹಿಳೆಯರ ಸಬಲೀಕರಣ ಉದ್ದೇಶದಿಂದ ಆಯೋಜಿಸಲಾಗುತ್ತದೆ, ಗ್ರಾಮೀಣ ಭಾಗದ ಮಹಿಳೆಯರಿಗೆ ಬೇರೆ ಬೇರೆ ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಿ ಅವರಿಗೆ ಧೈರ್ಯವನ್ನು ತುಂಬುವಂತಹ ಕಾರ್ಯಕ್ರಮ ಜ್ಞಾನ ವಿಕಾಸ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು. ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಅಶ್ವಿನಿ ಅವರು ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮಗಳ ಬಗ್ಗೆ ಪರಿಚಯ ಮಾಡಿಸಿ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರನ್ನು ಒಗ್ಗೂಡಿಸುವಲ್ಲಿ ಕೇಂದ್ರದ ಕಾರ್ಯಕ್ರಮ ಮಹತ್ತರ ಪಾತ್ರ ವಹಿಸಿದೆ ಎಂದು ತಿಳಿಸಿದರು. ಸರಿತಾ ಅಧ್ಯಕ್ಷತೆ ವಹಿಸಿದ್ದರು. ಗೀತಾ ಸ್ವಾಗತಿಸಿ, ಸೇವಾಪ್ರತಿನಿಧಿ ಸೌಮ್ಯ ವಂದಿಸಿದರು.