ಆಲಂಕಾರು: ಆಲಂಕಾರಿನಲ್ಲಿ ಜೂ.18ರಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಸರಕಾರದ ಅದೇಶದಂತೆ ಜಿಲ್ಲಾಧಿಕಾರಿಗಳು ಆಲಂಕಾರಿನಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 5:00ರ ತನಕ ಗ್ರಾಮ ವಾಸ್ತವ್ಯ ಮಾಡಲಿದ್ದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ತವ್ಯದಲ್ಲಿ ಉಪಸ್ಥಿತರಿರುತ್ತಾರೆ. ಕಂದಾಯ ಹಾಗು ಇನ್ನಿತರ ಇಲಾಖೆಗಳ ವಿವಿಧ ಸೌವಲತ್ತುಗಳ ಬಗ್ಗೆ ಹಾಗು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಅವಲೋಕನ ಮಾಡಲಿದ್ದಾರೆ. ಆಲಂಕಾರು ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಡಬ ತಹಶೀಲ್ದಾರ್ ಅನಂತ ಶಂಕರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.