ಬೆಟ್ಟಂಪಾಡಿ: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಗಳಲ್ಲೊಂದಾದ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಕೊಠಡಿಗಳ, ಕೇಶವ ದರ್ಶಿನಿ ಸಭಾಂಗಣ ಹಾಗೂ ಸುಮೇಧ ಗಣಕಯಂತ್ರ ಕೊಠಡಿಯ ಉದ್ಘಾಟನೆ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ. 18 ರಂದು ನಡೆಯಲಿದೆ.
ಶಾಸಕ ಸಂಜೀವ ಮಠಂದೂರು ವಿವಿಧ ಕೊಠಡಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಹಾಗೂ ನೋಟರಿ ನ್ಯಾಯವಾದಿ ಚಿದಾನಂದ ಬೈಲಾಡಿಯವರು ಉಪಸ್ಥಿತರಿರಲಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಎಸ್ಎಸ್ಎಲ್ಸಿ ದಾಖಲೆಯ ಫಲಿತಾಂಶ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳೆದ 6 ವರ್ಷಗಳಿಂದ ನಿರಂತರ ಶೇ. 100 ಫಲಿತಾಂಶ ಬರುತ್ತಿದ್ದು, ಈ ಬಾರಿ ಶಾಲೆಗೆ ವಿಶೇಷ ಸಾಧನೆಯೊಂದಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ನಿಟ್ಟಿನಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವೂ ಇದೇ ವೇಳೆ ನಡೆಯಲಿದೆ.