ಪುತ್ತೂರು : ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.17ರಂದು ಯೋಗ ದಿನಾಚರಣೆ ನಡೆಯಿತು.
ಸಂಘದ ಅದ್ಯಕ್ಷ ಕರುಣಾಕರ ಶೆಟ್ಟಿ ಕೊಮ್ಮಂಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ನಿರ್ದೇಶಕ ಶೇಷಪ್ಪ ರೈ ಮೂರ್ಕಾಜೆ ಯೋಗಾಭ್ಯಾಸ ನಡೆಸಿಕೊಟ್ಟರು. ಕೆಎಂಎಫ್ ಪಶುವೈದ್ಯಾಧಿಕಾರಿ ಅನುದೀಪ್ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಸತೀಶ್ ರೈ ಮೂರ್ಕಾಜೆ ಹಾಗೂ ನಿರ್ದೇಶಕರು, ಸದಸ್ಯರು ಭಾಗವಹಿಸಿದರು.