ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು, ಬೆಟ್ಟಂಪಾಡಿ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪಾಣಾಜೆ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಾಣಾಜೆ ಇದರ ಸಹಕಾರದೊಂದಿಗೆ ವೇದ ಮೂರ್ತಿ ಶ್ರೀಕೃಷ್ಣ ಭಟ್ ಬಟ್ಯಮೂಲೆ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಜೂ.19 ರಂದು ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8 ರಿಂದ ಪೂಜೆ ಪ್ರಾರಂಭವಾಗಿ 10 ಗಂಟೆಗೆ ಮಂಗಳಾರತಿ ನಡೆಯಲಿದೆ. ನಂತರ ಧಾರ್ಮಿಕ ಸಭೆ, ಒಕ್ಕೂಟದ ಪದಗ್ರಹಣ ನಡೆದು ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಪೂಜಾ ಸಮಿತಿ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಸೇವಾ ಪ್ರತಿನಿಧಿ ಜಯಶ್ರೀ. ಡಿ ಮತ್ತು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.