ಕೊಳ್ತಿಗೆ: ತಹಶೀಲ್ದಾರ್ ಗ್ರಾಮ ವಾಸ್ತವ್ಯದಲ್ಲಿ ಲಂಚ,ಭ್ರಷ್ಟಾಚಾರ ಘೋಷಣೆ, ಪ್ರತಿಜ್ಞೆ ಸ್ವೀಕಾರ

0

ಪುತ್ತೂರು: ಸುದ್ದಿ ಜನಾಂದೋಲನ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ , ಉತ್ತಮ ಸೇವೆಗೆ ಪುರಸ್ಕಾರ ಎಂಬ ಆಂದೋಲನಕ್ಕೆ ಬೆಂಬಲ ಸೂಚಿಸಿ ಕೊಳ್ತಿಗೆಯಲ್ಲಿ ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ಘೋಷಣೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ರವರ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಗ್ರಾಮಸ್ಥರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಲಂಚ, ಭ್ರಷ್ಟಾಚಾರ ನಿರ್ಮೂಲನೆಯೇ ದೊಡ್ಡ ಜನಸೇವೆ ಮತ್ತು ದೇಶ ಸೇವೆ, ಉತ್ತಮ ಸೇವೆಗೆ ಪುರಸ್ಕಾರ, ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಲಂಚ ಎಂದರೆ ದರೋಡೆ ಭ್ರಷ್ಟಾಚಾರ ಎಂದರೆ ದೇಶದ್ರೋಹ, ಲಂಚ ಭ್ರಷ್ಟಾಚಾರ ಮುಕ್ತ ಊರು, ತಾಲೂಕು ಜಿಲ್ಲೆ ನಮ್ಮದಾಗಲಿ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಪ್ರತಿಜ್ಞಾ ವಿಧಿ ಬೋಧಿಸಿದರು.

LEAVE A REPLY

Please enter your comment!
Please enter your name here