ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನೂತನ ಚಿಣ್ಣರ ಅಂಗಣದ ಉದ್ಘಾಟನೆಯನ್ನು ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿಯವರು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು ಶುಭಹಾರೈಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಶಿಕ್ಷಕಿ ಸರಸ್ವತಿ ಎಂ, ಹಾಗೂ ಶಿಕ್ಷಕ ವೃಂದ, ಶಿಕ್ಷಕೇತರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಟ್ಟಡದ ಗೊಡೆಯ ಸುತ್ತ ಪರಿಸರ ಬಿಂಬಿಸುವ ಚಿತ್ತಾಕರ್ಷಕಗಳು ವಿಶೇಷ ಆಕರ್ಷಣೆಯಾಗಿದೆ.