ಮೂವರು ಅಪರಿಚಿತರಿಂದ ಶೈಲಜಾ ಅಮರನಾಥ್ ಅವರ ಮನೆಗೆ ಹಾನಿ – ರೂ.30ಸಾವಿರ ನಷ್ಟ

0

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೇಸ್ ಪಕ್ಷ ದ ಪ್ರಧಾನ ಕಾರ್ಯದರ್ಶಿಯಾಗಿರುವ ಶೈಲಜಾ ಅಮರನಾಥ್ ಅವರ ಬಪ್ಪಳಿಗೆರುವ  ಮನೆಗೆ ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರು ಮನೆಯ ಕಿಟಿಕಿಗಳಿಗೆ ಕಲ್ಲು ಬಿಸಾಡಿ, ಮಡ್ ಆಯಿಲ್ ಕಿಟಕಿಗೆ ಚೆಲ್ಲಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ರೂ. 30ಸಾವಿರ ನಷ್ಟವುಂಟಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಶೈಲಜಾ ಅಮರ್‌ನಾಥ್ ಅವರು ತಿಳಿಸಿದ್ದಾರೆ.

ನ್ಯಾಯವಾದಿಯಾಗಿರುವ ವಿ ಶೈಲಜಾ ಅವರು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೇಸ್ ಪಕ್ಷ ದ ಪ್ರಧಾನ ಕಾರ್ಯದರ್ಶಿಯಾಗಿದ್ದು ಜೂ. 18ರಂದು ಸಂಜೆ ಮನೆಯಲ್ಲಿದ್ದ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತರು ಮನೆಯ ಕಿಟಕಿಗಳಿಗೆ ಕಲ್ಲು ಬಿಸಾಡಿ ಕಿಟಕಿಯ ಗಾಜುಗಳನ್ನು ಪುಡಿ ಮಾಡಿದ್ದಲ್ಲದೆ ಮಡ್ ಆಯಿಲ್ ಅನ್ನು ಕಿಟಕಿಗೆ ಚೆಲ್ಲಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಮೂವರು ಅಪರಿಚಿತರನ್ನು ಪತ್ತೆ ಮಾಡಿ ಅವರ ವಿರದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶೈಲಜಾ ಅಮರನಾಥ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಮನೆಗೆ ಹಾನಿಯಾಗಿದ್ದು ರೂ. 30ಸಾವಿರ ನಷ್ಟ ಸಂಭವಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here