ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಪುತ್ತೂರು ತಾಲೂಕು ಇದರ ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯಿಂದ ನಾಮ ನಿರ್ದೇಶಿತ ಸದಸ್ಯರನ್ನಾಗಿ ಬೆಟ್ಟಂಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಮಿತ್ತಡ್ಕರವರನ್ನು ಆಯ್ಕೆ ಮಾಡಲಾಗಿದೆ.
ಇವರು ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿಯಾಗಿ, ನೇತ್ರಾವತಿ ಕ್ರೀಡಾ, ಕಲಾ ಸಂಘ ಬಿ.ಸಿ. ರೋಡ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕೇಸರಿ ಮಿತ್ರವೃಂದ ಮಿತ್ತಡ್ಕ ಇದರ ಸ್ಥಾಪಕ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ಪ್ರಸ್ತುತ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ -2 ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೊಶಿಯೇಶನ್ ಇದರ ಕಾರ್ಯದರ್ಶಿಯಾಗಿ ಪ್ರಸ್ತುತ ಉಪಾಧ್ಯಕ್ಷರಾಗಿ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಜೊತೆ ಕೋಶಾಧಿಕಾರಿಯಾಗಿ, ಬೆಟ್ಟಂಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ವಿವೇಕ ಯುವಕ ಮಂಡಲ ಬೆಟ್ಟಂಪಾಡಿ ಇದರ ಗೌರವ ಸಲಹೆಗಾರರಾಗಿರುತ್ತಾರೆ.