ಬೆಟ್ಟಂಪಾಡಿ: ಇಲ್ಲಿನ ನವೋದಯ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡರವರು ಮೇ 31 ರಂದು ವೃತ್ತಿಯಿಂದ ನಿವೃತ್ತಿಯಾಗಿದ್ದು, ಅವರ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಜೂ. 25 ರಂದು ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಾಗರಿಕ ಸನ್ಮಾನ ‘ದಯಾಭಿಮಾನ’ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಜೂ. 19 ರಂದು ನಡೆಯಿತು. ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರೂ, ನಾಗರಿಕ ಸನ್ಮಾನ ಸಮಿತಿಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಕಾರ್ಯದರ್ಶಿ ಮಹಮ್ಮದ್ ಕುಕ್ಕುವಳ್ಳಿ, ಕೋಶಾಧಿಕಾರಿ ಪ್ರಕಾಶ್ ರೈ ಬೈಲಾಡಿ, ನಿವೃತ್ತ ಚಿತ್ರಕಲಾ ಶಿಕ್ಷಕ ಐ. ಗೋಪಾಲಕೃಷ್ಣ, ರಾಧಾಕೃಷ್ಣ ರೈ ಪಟ್ಟೆ, ಸೀತಾರಾಮ ಗೌಡ ಮಿತ್ತಡ್ಕ, ಸುಧಾಕರ ರೈ ಗಿಳಿಯಾಲು, ಅರುಣ್ ಪ್ರಕಾಶ್ ರೈ ಮದಕ, ಸಂಜೀವ ಪೂಜಾರಿ ಕಾನ, ಸದಾಶಿವ ರೈ ಸೂರಂಬೈಲು, ದಾಮೋದರ ಕಜೆ, ಕೃಷ್ಣಪ್ರಸಾದ್ ಬೆಟ್ಟಂಪಾಡಿ, ನವೀನ್ ಕುಮಾರ್, ಅಬ್ದುಲ್ ಕುಂಞಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತಾಗಿ ಪೂರ್ವಭಾವಿ ಸಮಾಲೋಚನೆ ಇದೇ ವೇಳೆ ನಡೆಯಿತು.