ಪುತ್ತೂರು: ವಿಶ್ವಯೋಗ ದಿನದಂದು ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು.
ವಿವೇಕಾನಂದ ಪಾಲಿಟೆಕ್ನಿಕ್ನ ಸಂಚಾಲಕ ಮಹಾದೇವ ಶಾಸ್ತ್ರಿಯವರು ಮಾತನಾಡಿ ಯೋಗದಿಂದ ಆರೋಗ್ಯ. ಯೋಗವು ನಮ್ಮನ್ನು ನಾವೇ ತಿಳಿದುಕೊಳ್ಳುವ ಸಾಧನ. ಆದ್ದರಿಂದ ಎಲ್ಲರೂ ಯೋಗಾಭ್ಯಾಸವನ್ನು ನಿತ್ಯವೂ ಮಾಡಿ ಸದೃಢರಾಗಿ ಎಂದು ಹಿತವಚನ ನುಡಿದರು. ಆಡಳಿತ ಮಂಡಳಿಯ ಸದಸ್ಯ ಈಶ್ವರಚಂದ್ರ ಭಾಗವಹಿಸಿದ್ದರು.
ಸಿವಿಲ್ ವಿಭಾಗದ ಮುಖ್ಯಸ್ಥ ರವಿರಾಮ ಎಸ್. ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಾಂಶುಪಾಲ ಚಂದ್ರಕುಮಾರ್ ಯೋಗ ದಿನದ ಮಹತ್ವವನ್ನು ತಿಳಿಸಿ ಧನ್ಯವಾದ ಸಮರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವರ್ಗ, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.