ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನ

0

ಪುತ್ತೂರು: ಸರ್ವೆ ಗ್ರಾಮದ ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ 2021-2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 591ಅಂಕ ಪಡೆದ ಕೀರ್ತನ್( ಕರ್ಮಿನಡ್ಕ ರಾಮಣ್ಣ-ಕಮಲರವರ ಪುತ್ರ) ಹಾಗೂ 589 ಅಂಕ ಪಡೆದ ರಶ್ಮಿತ(ಅಶೋಕ-ಸವಿತಾರವರ ಪುತ್ರಿ) ಅವರನ್ನು ಅಭಿನಂದಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಎಲಿಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿಯ ಸದಸ್ಯ ಅಶೋಕ ರೈ ಸೊರಕೆ ಶಾಲು ಹೊದಿಸಿ ಸನ್ಮಾನಿಸಿದರು. ಸಂಘದ ಅಧ್ಯಕ್ಷರಾದ ಹರೀಶ್ ನಾಯ್ಕ ಎಲಿಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಸುಂದರ ಬಲ್ಯಾಯ, ಗೌರವ ಸಲಹೆಗಾರರಾದ ಪದ್ಮಯ್ಯ ನಾಯ್ಕ ಮತ್ತು ತಿಮ್ಮಪ್ಪ ನಾಯ್ಕ ಶುಭ ಹಾರೈಸಿದರು. ಸಂಘದ ಕಾರ್ಯದರ್ಶಿ ವಿಘ್ನೇಶ್ ಪಂಡಿತ್ ಸ್ವಾಗತಿಸಿದರು. ಭರತ್ ಕುಮಾರ್ ವಂದಿಸಿದರು. ಕೃತಿ ಬಲ್ಯಾಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here