ಕೆಮ್ಮಾರ ಶಾಲೆಯಲ್ಲಿ ‘ಗ್ರಾಮಕ್ಕೊಂದು ಮಾದರಿ ಶಾಲೆ’ ಚಿಂತನ ಮಂಥನ ಕಾರ್ಯಕ್ರಮ

0

ಉಪ್ಪಿನಂಗಡಿ: ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಯಲ್ಲಿ ‘ ಗ್ರಾಮಕ್ಕೊಂದು ಮಾದರಿ ಶಾಲೆ’ ಚಿಂತನ ಮಂಥನ ಕಾರ್ಯಕ್ರಮ ಜೂ.20ರಂದು ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಅಝೀಝ್ ಬಿ.ಕೆ., ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿದ್ದ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿ ತನುಜಾರವರು ಕಾರ್ಯಕ್ರಮ ಉದ್ಘಾಟಿಸಿ ಮಾದರಿ ಶಾಲೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಸೀತಮ್ಮ ಮಾಹಿತಿ ನೀಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್‌ದಾಸ್ ಶೆಟ್ಟಿ ಶುಭಹಾರೈಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಸುಮಯ್ಯ, ಸದಸ್ಯರಾದ ವಾಮನ, ಪದ್ಮನಾಭ ಶೆಟ್ಟಿ, ಆಯಿಷಾ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಸಭೆಯಲ್ಲಿ ಹಿರೆಬಂಡಾಡಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯಶಿಕ್ಷಕ ಬಾಬು, ಅಡೆಕ್ಕಲ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕಿ ಸೆಲೀನಾ, ಕೆಮ್ಮಾರ ಶಾಲೆಯ ಪೋಷಕರು, ಊರವರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಎಂ., ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ವಂದಿಸಿದರು. ಶಿಕ್ಷಕಿ ಸುಮನಾ ಕೆ.ಎಸ್., ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here