ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

0

ಪುತ್ತೂರು: ಯೋಗಾಭ್ಯಾಸವು ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧನ.ಯೋಗದ ನಿರಂತರ ಅಭ್ಯಾಸದಿಂದ ಮನೋನಿಯಂತ್ರಣ,ಇಂದ್ರಿಯ ನಿಗ್ರಹ,ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು. ಪಾರಮಾರ್ಥಿಕ ಸತ್ಯದೆಡೆಗೆ,ಆತ್ಮದ ಅರಿವನ್ನು ಪಡೆಯುವುದರೆಡೆಗೆ ಸಾಗಲು ಮನುಷ್ಯರಿಗೆ ನೆರವಾಗುವಂತದ್ದೆಲ್ಲವೂ ಯೋಗವೇ ಎಂದು ಪುತ್ತೂರಿನ ಸಿಟಿ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ತಜ್ಞರಾಗಿರುವ ಡಾ.ಚೇತನಾ ಗಣೇಶ್ ರವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್‍ಯಕ್ರಮದಲ್ಲಿ ಅವರು ಯೋಗದ ಪ್ರಾಮುಖ್ಯತೆಯನ್ನು ತಿಳಿಸುತ್ತಾ ಮಾತನಾಡಿದರು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ರವರು ಮಾತನಾಡುತ್ತಾ, ವಾಸ್ತವವಾಗಿ ಯೋಗ ಎಂಬುದು ಶರೀರ, ಮನಸ್ಸು ಮತ್ತು ಆತ್ಮದ ಒಂದು ಕನ್ನಡಿಯಾಗಿ ವರ್ತಿಸುತ್ತದೆ ಹಾಗೂ ನಮ್ಮನ್ನು ನಾವು ಕಂಡುಕೊಳ್ಳುವುದಕ್ಕೆ ಮಧ್ಯವರ್ತಿಯಾಗಿ ಕೆಲಸಮಾಡುತ್ತದೆ ಜೀವನದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದ, ಸಂತೋಷ, ಯಶಸ್ಸು ಎಲ್ಲವೂ ಕೈಗೂಡಬೇಕೆಂದರೆ ಯೋಗಾಭ್ಯಾಸವು ಅನಿವಾರ್ಯವಾಗಿರುತ್ತದೆ ಎಂದು ಹೇಳಿದರು.

ಕಾರ್‍ಯಕ್ರಮದ ಬಳಿಕ ವಿವಿಧ ಯೋಗಾಸನದ ಪ್ರಕಾರಗಳನ್ನು ವಿದ್ಯಾರ್ಥಿಗಳಿಗೆ ಡಾ.ಚೇತನಾ ಗಣೇಶ್ ತಿಳಿಸಿದರು . ಡಾ.ಚೇತನಾ ಗಣೇಶ್‌ರವರ ವಿದ್ಯಾರ್ಥಿನಿಯಾದ ಲೀಲಾವತಿ ರವರು ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಉಪನ್ಯಾಸಕ ಮಧುರಾ ಸ್ವಾಗತಿಸಿ,ವಂದಿಸಿದರು. ಕಾರ್‍ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here