ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಆಡಳಿತಾಧಿಕಾರಿಯಾಗಿ ರವೀಂದ್ರ ದರ್ಬೆ ನೇಮಕ

0

ವಿಟ್ಲ : ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಆಡಳಿತಾಧಿಕಾರಿಯಾಗಿ  ರವೀಂದ್ರ ದರ್ಬೆರವರು ನೇಮಕಗೊಂಡಿದ್ದಾರೆ.  ಉತ್ತಮ ಗಣಿತ ಶಿಕ್ಷಕರಾಗಿ ಗುರುತಿಸಲ್ಪಟ್ಟ ಇವರು ಕಳೆದ 26 ವರ್ಷಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ದುಡಿದ ಅನುಭವ ಹೊಂದಿದ್ದಾರೆ. ಉಪ್ಪಿನಂಗಡಿಯ ಇಂದ್ರಪ್ರಸ್ತ   ಆಂಗ್ಲಮಾಧ್ಯಮ ಶಾಲೆಯಲ್ಲಿ 13 ವರ್ಷಗಳ ಕಾಲ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ನೆಲ್ಯಾಡಿ, ರಾಮಕುಂಜ ಹಾಗೂ ಗೋಣಿಕೊಪ್ಪಲಿನ ಪ್ರಸಿದ್ದ ಕೂರ್ಗ್ ಪಬ್ಲಿಕ್ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರವೀಂದ್ರ ದರ್ಬೆಯವರು ಅಂತರಾಷ್ಟ್ರೀಯ ಸಂಸ್ಥೆಗಳಾದ ಉಪ್ಪಿನಂಗಡಿಯ ಜೇಸಿ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿದ್ದರು ಮಾತ್ರವಲ್ಲದೆ ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here