ಶೈಲಜಾ ಅಮರನಾಥ್‌ರವರ ಮನೆಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ್ದ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಎಸ್ಪಿಗೆ ಮನವಿ

0

ಪುತ್ತೂರು : ಪುತ್ತೂರು ಕಾಂಗ್ರೆಸ್ ನಾಯಕಿ ಶೈಲಜಾ ಅಮರನಾಥ್‌ರವರ ಮನೆಯ ಮೇಲೆ ದಾಳಿ ಮಾಡಿ ಮನೆಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ್ದ ದುಷ್ಕರ್ಮಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಿಗೆ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ.

ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಆಡಿಯೋ ಶೈಲಜಾ ಅಮರನಾಥ್ ಅವರದ್ದು ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಪ್ರಚಾರ ಪಡಿಸುತ್ತಿದ್ದಾರೆ. ಆ ಆಡಿಯೋ ನನ್ನದಲ್ಲ ಎಂದು ಶೈಲಜಾರವರು ಸ್ಪಷ್ಟಪಡಿಸಿದ್ದಾರೆ. ಆದುದರಿಂದ ಈ ಆಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಮಾಡಬೇಕು. ತಪ್ಪಿತಸ್ಥರನ್ನು ಕಾನೂನಿನಡಿಯಲ್ಲಿ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದೂ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನ ರಮಾನಂದ ಪೂಜಾರಿ, ಕೆಪಿಸಿಸಿ ಸಂಯೊಜಕ ಚಿತ್ತರಂಜನ್ ಶೆಟ್ಟಿ, ಮಾಜಿ ಕಾರ್ಪೊರೇಟರ್‌ಗಳಾದ ಭಾಸ್ಕರ ರಾವ್, ನಾಗೇಂದ್ರ ಕುಮಾರ್, ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಮನುರಾಜ್, ಸತೀಶ್ ಪೆಂಗಲ್ ಬೋಳೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here