ಪುತ್ತೂರು: ರೋಟರಿಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಜಗಜೀವನ್ ರೈ ಅವರು ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು. ರೋಟರಿ ಯುವ ಸದಸ್ಯೆ ಡಾ. ಅನಿಲಾ ದೀಪಕ್ ಶೆಟ್ಟಿ ಯೋಗದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಿದರು. ವೇದಿಕೆಯಲ್ಲಿ ರೋಟರಿ ಯುವದ ಅಧ್ಯಕ್ಷ ಭರತ್ ಪೈ, ನಿಯೋಜಿತ ಅಧ್ಯಕ್ಷೆ ರಾಜೇಶ್ವರಿ ಆಚಾರ್, ಕಾರ್ಯದರ್ಶಿ ಅಶ್ವಿನಿ ಕೃಷ್ಣ ಮುಳಿಯ, ಯೋಗ ಪಟು ನವ್ಯತಾ, ರೋಟರಿ ವಲಯ ಸೇನಾನಿ ಡಾ. ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು. 11 ದಿವಸ ಕಾಲ ಉಚಿತವಾಗಿ ಯೋಗ ತರಬೇತಿ ಶಿಬಿರವನ್ನು ನಡೆಸಿಕೊಟ್ಟ ಡಾ. ನವ್ಯತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪಶುಪತಿ ಶರ್ಮ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಯುವದ ಮಾಜಿ ಅಧ್ಯಕ್ಷ ಚೇತನ್ ಪ್ರಕಾಶ್ ಕಜೆ, ನರಸಿಂಹ ಪೈ ಸೇರಿದಂತೆ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.