ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು, ಯುವ ಮತ್ತು ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇವರ ಸಹಯೋಗದೊಂದಿಗೆ ದ್ವಿತೀಯ ಪಿ. ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣ ಕುರಿತು ಎಜುಕೇಶನ್ ಗೈಡ್ ಕಾರ್ಯಕ್ರಮ ಜೂ 25ರಂದು ಪುತ್ತೂರು ತೆಂಕಿಲ ಒಕ್ಕಲಿಗ ಸಮುದಾಯದ ಭವನದ ಚುಂಚಶ್ರೀ ಎ. ಸಿ ಹಾಲ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಇಲಾಖೆಗಳಿಂದ ದೊರೆಯುವ ಸ್ಕಾಲರ್ ಶಿಪ್ ಮಾಹಿತಿ, ದ. ಕ, ಉಡುಪಿ ಮತ್ತು ಕೊಡಗು ಜಿಲ್ಲೆಯ ಎಲ್ಲಾ ಕಾಲೇಜುಗಳ ಶಿಕ್ಷಣದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.