ಕಾಣಿಯೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೇತೃತ್ವದಲ್ಲಿ ಎಂಟನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ .ಪಿ ವಹಿಸಿ ಯೋಗಾಭ್ಯಾಸ ನಿರಂತರ ಅಭ್ಯಾಸವಾಗಬೇಕಿದ್ದು ವಿದ್ಯಾರ್ಥಿ ಜೀವನಕ್ಕೆ ಪೂರಕವಾದುದಾಗಿದೆ ಎಂದು ತಿಳಿಸಿದರು .ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಪದ್ಮನಾಭ.ಕೆ ನೆಟ್ಟಾರು ಮತ್ತು ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ಸ್ವಾಮಿ.ಎಸ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾರ್ಗದರ್ಶನ ಮಾಡಿದರು.ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ವೆಂಕಟೇಶ ಪ್ರಸನ್ನ ಪಿ.ಕೆ ,ಹಿರಿಯ ಶ್ರೇಣಿ ಗ್ರಂಥಪಾಲಕರಾದ ಡಾ.ರವಿಚಂದ್ರ ನಾಯ್ಕ್ ಮತ್ತು ಎನ್ ಎಸ್ ಎಸ್ ಘಟಕ ನಾಯಕ ಉಜಿತ್ ಶ್ಯಾಮ್ ,ನಾಯಕಿ ಕು.ಹರ್ಷಿತಾ.ಸಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.