ಪುತ್ತೂರು: ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಯ ಗ್ರಂಥಪಾಲಕಿ ನಮಿತಾರವರು ಪದೋನ್ನತಿ ಹೊಂದಿ ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿಯಾಗಿ ವರ್ಗಾವಣೆಗೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ ಉಮೇಶ್ ಬಂಗೇರರವರ ಪತ್ನಿ ನಮಿತಾರವರು ಮಂಗಳೂರಿನ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರಾಗಿ ಸರಕಾರಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸಿದ್ದರು. ಜತೆಗೆ ಸುಳ್ಯ ಗ್ರಂಥಾಲಯದ ಪ್ರಭಾರ ಗ್ರಂಥಪಾಲಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇದೀಗ ಭಡ್ತಿ ಪಡೆದಿರುವ ನಮಿತಾರವರು ಜೂನ್ 23ರಂದು ಉಡುಪಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.