ಕಲ್ಲಡ್ಕ : ಜ್ವರದಿಂದ ಆರು ವರ್ಷದ ಆರಾಧ್ಯ ಆಚಾರ್ಯ ಮೃತ್ಯು

0

ಪುತ್ತೂರು : ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಜೂ.23ರಂದು ನಡೆದಿದೆ. ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ, ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಆರಾಧ್ಯ ಆಚಾರ್ಯ ಮೃತ ಬಾಲಕಿ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಉಲ್ಬಣಿಸಿದ್ದು ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಜೂ.23ರಂದು ರಜೆ ನೀಡಲಾಗಿದೆ.

LEAVE A REPLY

Please enter your comment!
Please enter your name here