ಪುತ್ತೂರು: ಬೈಕ್ ಸ್ಕಿಡ್ ಆಗಿ ಸವಾರ ಗಾಯಗೊಂಡ ಘಟನೆ ಜೂ.23ರಂದು ಸಂಜೆ ತಿಂಗಳಾಡಿಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ಹೋಗುತ್ತಿದ್ದ ಬೈಕ್ ತಿಂಗಳಾಡಿ ಕಣ್ಣೂರು ಕಾಂಪ್ಲೆಕ್ಸ್ ಸಮೀಪ ಮುಖ್ಯ ರಸ್ತೆಯಲ್ಲಿ ಸ್ಕಿಡ್ ಆಗಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆ ಹಾಗೂ ಮುಖದ ಭಾಗಕ್ಕೆ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೈಕ್ ಸವಾರನನ್ನು ರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ದಾರೆ. ಬೈಕ್ ಸವಾರ ತಿಂಗಳಾಡಿ ಸಮೀಪದ ಸುಭಾಷ್ ಎಂದು ತಿಳಿದು ಬಂದಿದೆ.