ಪಂಜದಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣ ; ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಪುತ್ತೂರು:ಪಂಜ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಪತ್ತೆ ಮಾಡಿದ್ದ, ಸ್ಕೂಟರ್‌ವೊಂದರಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮೇ 19ರಂದು ಪಂಜದಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಆಕ್ಟಿವಾ ಸ್ಕೂಟರ್‌ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರನ್ನು ಕಂಡು ಆರೋಪಿ ಸುಳ್ಯ ಪಂಬೆತ್ತಡಿ ಗ್ರಾಮದ ಪುಟ್ಟಣ್ಣ ಗೌಡ ಎಂಬವರು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿ ವಿರುದ್ಧ ಅಬಕಾರಿ ಕಾಯ್ದೆ 1965ರ ಕಲಂ 11,12, 14ರ ಉಲ್ಲಂಘನೆ ಮತ್ತು ಕಲಂ 32(1), 38(ಎ) ಹಾಗು 43(ಎ)ರಡಿ ಪ್ರಕರಣ ದಾಖಲಿಸಿದ್ದರು.ಆರೋಪಿ ಪುಟ್ಟಣ್ಣ ಗೌಡ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ಆರೋಪಿ ಪರ ವಕೀಲರಾದ ಹರೀಶ್ ಕುಮಾರ್ ಬಳಕ್ಕ ಮತ್ತು ದೀಪಕ್ ಬೊಳುವಾರು, ಅಕ್ಷತಾ ಬನಾರಿ ವಾದಿಸಿದ್ದರು.

LEAVE A REPLY

Please enter your comment!
Please enter your name here