- ಇಚ್ಛಾಶಕ್ತಿ ಇದ್ದಾಗ ಸರಕಾರಿ ಆಸ್ಪತ್ರೆಯನ್ನು ಯಾವ ರೀತಿಯಲ್ಲಿ ಬದಲಾವಣೆ ಮಾಡಬಹುದೆನ್ನುವುದಕ್ಕೆ ಇದು ಸಾಕ್ಷಿ: ನಳಿನ್ ಕುಮಾರ್
- ಆರೋಗ್ಯ ಮತ್ತು ಶಿಕ್ಷಣಕ್ಕೆ ಕೇಂದ್ರ ಸರಕಾರ ಹೆಚ್ಚು ಒತ್ತು ನೀಡುತ್ತಿದೆ: ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ವಿಟ್ಲ: ಖಾಸಗಿ ಆಸ್ಪತ್ರೆಗೆ ಪೈಪೋಟಿ ನೀಡುವ ರೀತಿಯಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆ ನಿರ್ಮಾಣವಾಗಲು ಕಾರಣವಾದ ಬಂಟ್ವಾಳ ಶಾಸಕರಿಗೆ ಅಭಿನಂದನೆ ಗಳು. ಇಚ್ಛಾಶಕ್ತಿ ಇದ್ದಾಗ ಸರಕಾರಿ ಆಸ್ಪತ್ರೆಯನ್ನು ಯಾವ ರೀತಿಯಲ್ಲಿ ಗುಣಮಟ್ಟದ ಆಸ್ಪತ್ರೆಯಾಗಿ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.
ಅವರು ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ 1.67 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಾಗಿ ನಿರ್ಮಾಣ ಮಾಡಲಾದ ಐಸಿಯು ಘಟಕದ ಲೋಕಾರ್ಪಣೆ ಮಾಡಿ ಮಾತನಾಡಿದರು. ಗ್ರಾಮೀಣ ಭಾಗದ ಬಡವರಿಗೆ ಅನುಕೂಲವಾಗುವಂತೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಮಾಡಲಾಗಿದೆ. ತಾಲೂಕು ಮಟ್ಟದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನು ಕೇಂದ್ರ ಸರಕಾರ ಮಾಡುತ್ತಿದೆ.
ಎಲ್ಲಾ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಯ ಶೈಲಿಯಲ್ಲಿ ನಿರ್ಮಿಸಿ, ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಗಳನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಅವರು ಹೇಳಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ಮಾತನಾಡಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಕೇಂದ್ರ ಸರಕಾರ ಹೆಚ್ಚು ಒತ್ತು ನೀಡುತ್ತಿದೆ. ಬಂಟ್ವಾಳ ತಾಲೂಕು ಆರೋಗ್ಯ ಕೇಂದ್ರವನ್ನು ಸುಸಜ್ಜಿತ ರೀತಿಯಲ್ಲಿ ನಿರ್ಮಾಣ ಮಾಡಿದ್ದೇವೆ. ಇನ್ನೊಂದು ಕೆಲವು ಸಣ್ಣ ಪುಟ್ಟ ಕೆಲಸಗಳು ಬಾಕಿಯಿದ್ದು, ಅದನ್ನು ಶೀಘ್ರವಾಗಿ ಮಾಡುವ ಭರವಸೆ ನೀಡಿದರು. ಆರೋಗ್ಯ ಇಲಾಖೆಯ ಸಮಿತಿ ಹಾಗೂ ವೈದ್ಯರ ಸಹಕಾರದಿಂದ ಆಸ್ಪತ್ರೆಯ ಅಭಿವೃದ್ಧಿಗೆ ಕಾರಣವಾಯಿತು ಎಂದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಮಾಜಿ ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಪ್ರಮುಖರಾದ ಮಾಧವ ಮಾವೆ, ನಂದರಾಮ ರೈ, ವಿಶ್ವನಾಥ ಚೆಂಡ್ತಿಮಾರ್, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ಸಂದೀಪ್ ಎಸ್.ಆರ್, ಡಿ.ಎಚ್.ಒ. ಡಾ.ಕಿಶೋರ್, ತಹಶೀಲ್ದಾರ್ ಸ್ಮಿತಾ ರಾಮು, ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಪುಷ್ಪಲತಾ,ಟಿ.ಎಚ್.ಒ.ಡಾ. ಸುದರ್ಶನ ಮೊದಲಾದವರು ಉಪಸ್ಥಿತರಿದ್ದರು.