ಪುತ್ತೂರು: ತುಮಕೂರಿನಲ್ಲಿ ಜೂ.25 ರ ತಡ ರಾತ್ರಿ ನಡೆದ ಸ್ಕೂಟರ್ ಗಳೆರಡರ ನಡುವೆ ನಡೆದ ಅಪಘಾತದಿಂದ ಮೂವರು ಮೃತಪಟ್ಟಿದ್ದು. ಈ ಪೈಕಿ ಓರ್ವರು ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಉದ್ಯಮಿ ಖಲಂದರ್(39ವ) ಎಂಬವರಾಗಿದ್ದಾರೆ.
ಮೂಲತಃ ಕಲ್ಲೇಗ ನಿವಾಸಿಯಾಗಿದ್ದ ಖಲಂದರ್ ಅವರು ಪರ್ಲಡ್ಕದ ಗೋಳಿಕಟ್ಟೆಯಲ್ಲಿ ವಾಸ್ತವ್ಯ ಹೊಂದಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು ಕೆಲಸದ ನಿಮಿತ ತುಮಕೂರಿಗೆ ಹೋಗಿದ್ದ ವೇಳೆ ತುಮಕೂರು ಮಡಿವಾಳ ರಸ್ತೆಯಲ್ಲಿ ಖಲಂದರ್ ಚಲಾಯಿಸುತ್ತಿದ್ದ ಸ್ಕೂಟರ್ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಗಳೆಡರ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಿಂದ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಖಲಂದರ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದ ಖಲಂದರ್:
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತನಗಾದ ಗಾಯದ ಅರಿವಿಲ್ಲದೆ ತೀವ್ರ ಗಾಯಗೊಂಡ ತನ್ನ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಸವಾರರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಭರದಲ್ಲಿದ್ದರು. ಕೆಲ ಸಮಯದ ಬಳಿಕ ಖಲಂದರ್ ಅವರ ಕಿವಿಯಿಂದ ಬರುತ್ತಿದ್ದ ರಕ್ತದ ಚಿಕಿತ್ಸೆಯ ಸಂದರ್ಭದಲ್ಲಿ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.