ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 8ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಅಧ್ಯಯನ ಕೇಂದ್ರ ಉಜಿರೆ ಇವರ ಸಹಯೋಗದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಕೆ.ಜಿ.ಪಾಟೀಲ್ರವರು ಯೋಗ ಕವಾಯತುಗಳನ್ನು ವಿದ್ಯಾರ್ಥಿಗಳಲ್ಲಿ ಮಾಡಿಸಿದರು. ಡಾ. ಗೀತಾ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರಾಜಯೋಗದ ಮಹತ್ವ ಮತ್ತು ಅದರಿಂದಾಗುವ ವಿವಿಧ ಪ್ರಯೋಜನಗಳನ್ನು ವಿವರಿಸಿದರು. ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ್ ಕುಂಬ್ಳೆ ಸ್ವಾಗತಿಸಿ, ಶಾಲೆಯ ಮುಖ್ಯಗುರು ಸತೀಶ್ ಭಟ್ ವಂದಿಸಿದರು. ಶಾಲೆಯ ಅಧ್ಯಾಪಕ ವೃಂದದವರು ಸಹಕರಿಸಿದರು.