ಯುವ ಕಾಂಗ್ರೆಸ್ ನೇತೃತ್ವದಲ್ಲಿ ಆರ್ಯಾಪು ಜಿ.ಪಂ.ಕ್ಷೇತ್ರ ವ್ಯಾಪ್ತಿಯ ಯುವ ಹಸ್ತಲಾಘವ ಕಾರ್ಯಕ್ರಮ

0

ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ವತಿಯಿಂದ ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಯುವ ಹಸ್ತಲಾಘವ ಕಾರ್ಯಕ್ರಮ ಜೂ. 26ರಂದು ಸಂಪ್ಯ ಅಕ್ಷಯ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ.ಬಿ, ಜಿ.ಪಂ.ಮಾಜಿ ಸದಸ್ಯರಾದ ಎಂ.ಎಸ್ ಮಹಮ್ಮದ್, ಅನಿತಾ ಹೇಮನಾಥ ಶೆಟ್ಟಿ,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ, ಎನ್.ಎಸ್.ಯು.ಐ. ಉಪಾಧ್ಯಕ್ಷ ಫಾರೂಕ್ ಬಾಯಬೆ, ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ, ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷ ಎ.ಕೆ ಜಯರಾಮ ರೈ, ಅಲ್ಪಸಂಖ್ಯಾತ ಘಟಕದ ದ.ಕ ಉಪಾಧ್ಯಕ್ಷ ಅಬ್ದುಲ್ ಖಾದರ್ ಮೇರ್ಲ, ಜಿಲ್ಲಾ ಇಂಟಕ್ ಉಪಾಧ್ಯಕ್ಷ ಪ್ರಸನ್ನ ಶೆಟ್ಟಿ, ತಾಲೂಕು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಮಾಜಿ ಪುರಸಭಾದ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಗ್ರಾ.ಪಂ. ಸದಸ್ಯ ಪುರುಷೋತ್ತಮ ರೈ ಬೂಡಿಯಾರು, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್,ಮಾಜಿ ತಾಲೂಕು ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಮಂಗಳೂರು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಡಬ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ.,ನಗರಸಭಾ ಮಾಜಿ ಸದಸ್ಯ ಅನ್ವರ್ ಖಾಸಿಂ, ಪ್ರಮುಖರಾದ ನಿಸಾರ್ ಸಂಪ್ಯ, ಮೋನು ಬಪ್ಪಳಿಗೆ ಸಹಿತ ಹಲವರು ಭಾಗವಹಿಸಿದ್ದರು. ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹನೀಫ್ ಪುಣ್ಚತ್ತಾರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕಮಲೇಶ್ ಸರ್ವೆದೋಳಗುತ್ತು ವಂದಿಸಿದರು. ಗ್ರಾ.ಪಂ.ಸದಸ್ಯ ನೇಮಾಕ್ಷ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ-ಶ್ರೀಪ್ರಸಾದ್ ಪಾಣಾಜೆ

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಸಂಪ್ಯದಲ್ಲಿ ನಡೆದ ಆರ್ಯಾಪು ಜಿ.ಪಂ.ಕ್ಷೇತ್ರ ವ್ಯಾಪ್ತಿಯ ಯುವ ಹಸ್ತಲಾಘವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಎಲ್ಲಾ ಮುಖಂಡರು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ ನೀಡಿದ್ದಾರೆ. ಯುವ ಕಾಂಗ್ರೆಸ್ ಸಾರಥ್ಯದಲ್ಲಿ ಇನ್ನಷ್ಟು ಕಾರ್ಯಕ್ರಮ ಆಯೋಜಿಸಲು ನಮಗೆ ಇನ್ನಷ್ಟು ಹುರುಪು ಸಿಕ್ಕಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here