ನೆಕ್ಕಿಲಾಡಿ ಪಿಡಿಓ ಕುಮಾರಯ್ಯ ಹೃದಯಾಘಾತದಿಂದ ನಿಧನ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿರುವ ಇವರು ಈ ಹಿಂದೆ ಮಚ್ಚಿನ ಗ್ರಾ.ಪಂ. ನಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆ ಪದೋನ್ನತಿಗೊಂಡು 34 ನೆಕ್ಕಿಲಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಲ್ಲಿ ಪಿಡಿಒ ಸ್ಥಾನ ಖಾಲಿ ಇದ್ದುದ್ದರಿಂದ ಪ್ರಭಾರ ಪಿಡಿಒ ಆಗಿಯೂ ನಿಯೋಜನೆಗೊಂಡಿದ್ದರು. ಜ್ವರ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಜೆಯಲ್ಲಿದ್ದ ಅವರಿಗೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಮೃತರು ಪತ್ನಿ ವಿಜಯ, ಮಕ್ಕಳಾದ ನಾಲ್ಕೂವರೆ ವರ್ಷದ ಶಿವಾನಿ, ಎರಡೂವರೆ ವರ್ಷದ ಜನ್ಯಶ್ರೀ ಅವರನ್ನು ಅಗಲಿದ್ದಾರೆ.

 

 

ಮೃತರ ಮೃತದೇಹವನ್ನು 34  ನೆಕ್ಕಿಲಡಿ ಗ್ರಾ.ಪಂ.ಗೆ ತಂದು ಅಂತಿಮ ದರ್ಶನಕ್ಕಿಡಲಾಯಿತು. ಈ ಸಂದರ್ಭ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಪುತ್ತೂರು ತಾಲೂಕು ನರೇಗದ ಸಹಾಯಕ ನಿರ್ದೇಶಕಿ ಶೈಲಜಾ, ಕಡಬ ತಾಲೂಕು ನರೇಗದ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ, ಮಚ್ಚಿನ ಗ್ರಾ.ಪಂ. ಅಧ್ಯಕ್ಷ ಚಂದ್ರಕಾಂತ್, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ಸದಸ್ಯ ಜಯಪ್ರಕಾಶ್ ಬದಿನಾರು, ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಧನಂಜಯ ನಟ್ಟಿಬೈಲ್, ಹಿರೇಬಂಡಾಡಿ ಗ್ರಾ.ಪಂ. ಸದಸ್ಯ ಶೌಕತ್ ಅಲಿ, ತಾ.ಪಂ. ಮಾಜಿ ಸದಸ್ಯೆ ಸುಜಾತಕೃಷ್ಣ, ಕರ್ನಾಟಕ ರಾಜ್ಯ ರೈತ ಸಂಘದ ದ.ಕ. ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ನಮ್ಮೂರು- ನೆಕ್ಕಿಲಾಡಿಯ ಅನಿ ಮಿನೇಜಸ್, ಸತ್ಯವತಿ ಪೂಂಜಾ, ಶಬೀರ್ ಅಹಮ್ಮದ್, ಅಝೀಝ್ ಪಿ.ಟಿ., ಜಯಶೀಲ, ಸಿಎ ಬ್ಯಾಂಕ್ ನಿವೃತ ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ್ ಹೆಗ್ಡೆ, ೩೪ ನೆಕ್ಕಿಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಅಸ್ಕರ್ ಅಲಿ, ಪ್ರಮುಖರಾದ ಸದಾನಂದ ನೆಕ್ಕಿಲಾಡಿ, ಹರೀಶ್ ನಾಯಕ್ ನಟ್ಟಿಬೈಲು, ಇಸ್ಮಾಯೀಲ್ ಮೇದರಬೆಟ್ಟು, ಅಮಿತಾ ಹರೀಶ್, ಹಮೀದ್ ಪಿ.ಟಿ., ಶರೀಫ್, ಸಿದ್ದೀಕ್ ಮೇದರಬೆಟ್ಟು, ಶುಕೂರ್ ಮತ್ತಿತರರಿದ್ದರು. ವಿವಿಧ ಗ್ರಾ.ಪಂ. ಪಿಡಿಒಗಳಾದ ಪ್ರವೀಣ್ ಕುಮಾರ್, ರವಿಚಂದ್ರ, ಜೆರಾಲ್ಡ್ ಡಿಸೋಜ, ದಿನೇಶ್ ಶೆಟ್ಟಿ, ನಮಿತಾ, ಮಂಜುಳಾ, ಕಾರ್ಯದರ್ಶಿಗಳಾದ ಗಿರಿಯಪ್ಪ ಗೌಡ, ರಾಘವೇಂದ್ರ ಗೌಡ, ಪರಮೇಶ್ವರ, ಮುಹಮ್ಮದ್ ಸಿರಾಜ್, ಸೇರಿದಂತೆ ಮತ್ತಿತರ ತಾ.ಪಂ. ಸಿಬ್ಬಂದಿ, ೩೪ ನೆಕ್ಕಿಲಾಡಿ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷೆ ಸ್ವಪ್ನ ಸೇರಿದಂತೆ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದು, ಅಂತಿಮ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here