ಪುತ್ತೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನು ಭೂ ಪರಿವರ್ತನೆ ರದ್ದು ಪಡಿಸಿ ರಾಜ್ಯ ಸರಕಾರದ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್.ಟಿ. ಘಟಕದಿಂದ ಪುತ್ತೂರು ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಿತು. ಇದೇ ಸಂದರ್ಭದಲ್ಲಿ ಭೂ ಪರಿವರ್ತನೆ ಆದೇಶ ರದ್ದು ಪಡಿಸಿರುವ ಪ್ರತಿಯನ್ನು ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ಅವರು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಕೆಪಿಎಸಿ ರಾಜ್ಯ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ, ಜಿ.ಪಂ ಮಾಜಿ ಅಧ್ಯಕ್ಷ ಸೋಮನಾಥ, ಎಸ್ಟಿ ಘಟಕದ ಐತ್ತಪ್ಪ, ಜಿಲ್ಲಾ ಮರಾಠಿ ಸಂರಕ್ಷಣ ಸಮಿತಿ ಅಧ್ಯಕ್ಷ ಅಶೋಕ್, ಜಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಕ್ಷಯ್, ನಗರಸಭೆ ಮಾಜಿ ಸದಸ್ಯ ಮುಖೇಶ್ ಕೆಮ್ಮಿಂಜೆ, ಶೇಷಪ್ಪ ನೆಕ್ಕಿಲು ಮಾತನಾಡಿದರು. ಎಸ್ಸಿ ಘಟಕದ ಕೇಶವ ಪಡೀಲು ಸೇರಿದಂತೆ ಹಲವಾರು ಕಾಂಗ್ರೆಸ್ ಎಸ್ಸಿ ಮತ್ತು ಎಸ್ಟಿ ಘಟಕದ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು.