ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಶ್ರೀದುರ್ಗಾಮಾರಿಯಮ್ಮ ಸೇವಾ ಟ್ರಸ್ಟ್ ಬ್ರಹ್ಮನಗರ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಬ್ರಹ್ಮನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ದ ಅಂತರರಾಷ್ಟ್ರೀಯ ದಿನಾಚರಣೆ ಆಚರಿಸಲಾಯಿತು. ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶ್ರೀದುರ್ಗಾಮಾರಿಯಮ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಅಶೋಕರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ನಿಯೋಜಿತ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಹಾಗೂ ನಿಯೋಜಿತ ವಲಯ ಸೇನಾನಿ ಸೆನೋರಿಟಾ ಆನಂದ್ರವರು ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಸುಂದರ ರೈ ಬಳ್ಕಾಡಿ ಪ್ರಾರ್ಥಿಸಿದರು. ನಿಯೋಜಿತ ಕಾರ್ಯದರ್ಶಿ ಸುರೇಶ್ ಪಿ. ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಸ್ವರ್ಣದ ಖಜಾಂಜಿ ದೀಪಕ್ ಬೊಳ್ವಾರು ಸಹಿತ ಹಲವಾರು ಮಂದಿ ಭಾಗವಹಿಸಿದರು.