ಪುತ್ತೂರು: ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ವಲಯ, ಮತ್ತು ಗ್ರಾಮ ಅರಣ್ಯ ಸಮಿತಿ ಕೊಳ್ತಿಗೆ ಇದರ ವತಿಯಿಂದ ವನಮಹೋತ್ಸವ ಮತ್ತು ಸಸಿ ವಿತರಣೆ ಕಾರ್ಯಕ್ರಮ ಕೊಳ್ತಿಗೆ ಸಮುದಾಯ ಭವನದಲ್ಲಿ ನಡೆಯಿತು. ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪ್ರಮೋದ್ ಕೆ ಎಸ್ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಕೊಳ್ತಿಗೆ ಗ್ರಾ.ಪಂ ಅಧ್ಯಕ್ಷ ಶ್ಯಾಮ್ ಸುಂದರ್, ಪುತ್ತೂರು ಎಪಿಎಂಸಿ ನಿರ್ದೇಶಕ ತೀರ್ಥಾನಂದ ದುಗ್ಗಳ, ಕೊಳ್ತಿಗೆ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ್ ಕುಮಾರ್ ರೈ, ಪೆರ್ಲಂಪಾಡಿ ಶಾಲಾ ಮುಖ್ಯಗುರು ನೀಲಾವತಿ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ವಲಯ ಅರಣ್ಯ ಅಧಿಕಾರಿ ಕಿರಣ್ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು ೭೮೫ ಗಿಡ ನೆಟ್ಟ ಗಣೇಶ್ ಭಟ್ ಮತ್ತು ಮಧು ಬಿ.ಬಿ ಅವರನ್ನು ಸನ್ಮಾನಿಸಲಾಯಿತು.
ಸಾರ್ವಜನಿಕರಿಗೆ ಸುಮಾರು ೭೫೦ ಗಿಡ ವಿತರಿಸಲಾಯಿತು. ಬೆಳ್ಳಾರೆ ಉಪವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜಿ, ಗೇರು ನಿಗಮದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕುಂಟಿಕಾನ, ಗ್ರಾ.ಪಂ ಸದಸ್ಯರಾದ ವೇದಾವತಿ, ಯತಿಂದ್ರ ಕೊಚ್ಚಿ, ತಾ.ಪಂ ಮಾಜಿ ಸದಸ್ಯ ಗಂಗಾಧರ ಗೌಡ ಕೆಮ್ಮಾರ, ಮಾಜಿ ಸದಸ್ಯ ಮುರಳೀಧರ ಗೌಡ ಕೆಮ್ಮಾರ ಅರಣ್ಯ ರಕ್ಷಕರಾದ ದೀಪಕ್, ಚಿದಾನಂದ ಉಪಸ್ಥಿತರಿದ್ದರು.
ಆನೆಗುಂಡಿ ಉಪವಲಯ ಅರಣ್ಯಾಧಿಕಾರಿ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಚಿದಾನಂದ ಸ್ವಾಗತಿಸಿದರು. ಅಶೋಕ್ ವಂದಿಸಿದರು.