ವಿಟ್ಲ: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ್ವರಿಗೆ ಯುವಕನೋರ್ವ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನೆಟ್ಲ ಮುಡ್ನೂರು ಗ್ರಾಮದ ನೇರಳಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಿಂದಾಗಿ ಗಾಯಗೊಂಡಿರುವ ಮಹಿಳೆ ಇದೀಗ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ.
ಅನಂತಾಡಿ ದೇವಿನಗರ ನಿವಾಸಿ ಸಂಜೀವ ರವರ ಪತ್ನಿ ಶಕುಂತಲಾ(35 ವ.) ರವರು ಮೃತಪಟ್ಟ ಮಹಿಳೆ ಚೂರಿ ಇರಿತದಿಂದಾಗಿ ಗಂಭೀರ ಗಾಯಗಳಾಗಿದ್ದ ಮಹಿಳೆಯನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗಾಯಾಳು ಮಹಿಳೆ ವಿವಾಹಿತರಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತ ಮಹಿಳೆ ಪುತ್ತೂರಿನಲ್ಲಿ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ವ್ಯಕ್ತಿ ಪರಾರಿಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ನೇರಳಕಟ್ಟೆ: ಯುವಕನಿಂದ ಮಹಿಳೆಗೆ ಚೂರಿ ಇರಿತ – ಗಾಯಾಳುವಿನ ಸ್ಥಿತಿ ಗಂಭೀರ